Monday, January 11, 2010

Thursday, December 31, 2009

ಶ್ರೀಕೃಷ್ಣದೇವರಾಯ

ಸ್ನೇಹಿತರೆ,
ನನ್ನ 5 ನೇ ಪುಸ್ತಕ ಶ್ರೀಕೃಷ್ಣದೇವರಾಯ ಬಿಡುಗಡೆಗೆ ಸಿದ್ಧವಾಗಿದೆ. ಪುಸ್ತಕದ ಬಿಡುಗಡೆ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ಮುಖಪುಟಗಳು ಇಲ್ಲಿವೆ. ಬಿಡುವು ಮಾಡಿಕೊಂಡು ಬನ್ನಿ.


Wednesday, May 13, 2009

ಮುಸ್ಸಂಜೆ ಮುಖಾಮುಖಿಯಾದ ಚಂದ್ರಶೇಖರ್

ಈ ಟಿವಿ ಕನ್ನಡ ವಾಹಿನಿಯ ಮುಖ್ಯಸ್ಥರಲ್ಲೊಬ್ಬರಾಗಿರುವ ಶ್ರೀ ಚಂದ್ರಶೇಖರ್ ಅವರದ್ದು ಕವಿ ಮನಸ್ಸು. ಪ್ರಾಯಶ: ಕವಿತೆ,ಕವನಗಳ ಬಗ್ಗೆ ಅವರು ಬ್ಲಾಗಿಸಿದಷ್ಟು ಮತ್ತೆ ಯಾರಾದರೂ ಬ್ಲಾಗಿಸಿರುವುದು ನನಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಮೊದಲ ಕವನ ಸಂಕಲನ “ಮುಸ್ಸಂಜೆಯ ಮುಖಾಮುಖಿ” ಬೆಂಗಳೂರಿನ ಯವನಿಕಾದಲ್ಲಿ ನಡೆಯಿತು. ಖ್ಯಾತ ಸಾಹಿತಿ ಹಾಗು ನಾಟಕಕಾರರಾದ ಡಾ.ಎಚ್. ಎಸ್.ವೆಂಕಟೇಶಮೂರ್ತಿಯವರು
ಪುಸ್ತಕ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಪ್ರೊ.ಬರಗೂರು ರಾಮಚಂದ್ರಪ್ಪ, ಖ್ಯಾತ ಚಿಂತಕರು ಹಾಗು ಚಲನಚಿತ್ರ
ನಿರ್ದೇಶಕರು, ವಿಶೇಷ ಅತಿಥಿಗಳಾಗಿ ಡಾ.ನಟರಾಜ್ ಹುಳಿಯಾರ್ ಹಾಗೂ ಇತರರು ಆಗಮಿಸಿದ್ದರು. ಕಾರ್ಯಕ್ರಮದ ಕೆಲ ಫೋಟೋಗಳು, ಪುಸ್ತಕದ ಮುಖಪುಟ, ಹಾಗೂ ಎರಡು ಸ್ಯಾಂಪಲ್ ಕವನಗಳು ಇಲ್ಲಿವೆ. ಹೆಚ್ಚಿನ ಕವನಗಳಿಗೆ ಅವರ ಬ್ಲಾಗ್ http://www.koogu.blogspot.com/
ಇಲ್ಲಿಗೆ ಭೇಟಿ ನೀಡಬಹುದು.








ಅನಂತ ಮೌನ
ಈ ಅನಂತ
ಮೌನ
ಚಿಂತನ, ಮಂಥನ
ಚಿರಯೌವನ.

ಬಿರುಗಾಳಿಗೆ ಮೈಯೊಡ್ಡಿ
ಭೋರ್ಗರೆವ ಅಲೆಗಳ
ಮೇಲೆ ರುದ್ರನರ್ತನ.

ಕಾಲಗರ್ಭದ ಮಿತಿ
ಭಾವ, ಬಂಧು
ಸಿಂಧೂರ ಸೌಂಧರ್ಯ
ನಿಸರ್ಗ ಚಿತ್ತದ ಜೊತೆ ಸರಸ.

ಈ ಹಾದಿಯಲ್ಲೆಲ್ಲಾ
ಕಲ್ಲು, ಮುಳ್ಳು
ಸಾಲು ಮರಗಳ
ನೆರಳು.

ಪಾಪಿಷ್ಟ, ಕೋಪಿಷ್ಟ
ಸಾಧು, ಸಂತ
ಇಳೆಗೆ ಎಲ್ಲವೂ
ಮೀಸಲು.

ನೀರವ ಮೌನ
ಒಮ್ಮೆಗೇ
ಬಿರುಗಾಳಿಯ
ಆಕ್ರಂದನ
ಮತ್ತದೇ ಮೌನ.


ಕವಿಗೂ ಉಂಟು ಒಂದು ಸ್ಧಾನ
ಮೋಡ ತಡೆದು
ಮಳೆ ಸುರಿಸಿದ
ಬೆಟ್ಟಕ್ಕೆ
ನೀರಿನ ಅಭಾವ.

ಬೆಟ್ಟದಿಳಿಜಾರಿನಲಿ
ನೀರು ನಿಲ್ಲಲು
ಸಾಧ್ಯವೆ?
ತಡೆಗೋಡೆ ವಿರಳ.

ಕೆಳಗೆಲ್ಲೋ
ಕಟ್ಚಲೂ ಬಹುದೊಂದು
ಅಣೆಕಟ್ಟು
ಅದಕ್ಕೇನು ಲಾಭ?

ಆದರೂ ಅದಕ್ಕೆ
ನಿಶ್ಚಿಂತೆ
ಇಲ್ಲ ಕಿಂಚಿತ್ತು
ಹಸಿರಿನ ಕೊರತೆ.

ಕುಡಿಯಲು ನೀರು
ಉರಿಬಿಸಿಲಿಗೆ ನೆರಳು
ಕಲ್ಲುಗುಂಡುಗಳಡಿ
ಬೀಸುವ ತಂಗಾಳಿ.

ಇಲ್ಲಿ ಜಾರುವ ಕವಿಗೂ
ಉಂಟು ಒಂದು ಸ್ಧಾನ.

Friday, May 1, 2009

ಮಿಥಿಕ್ ಸೊಸೈಟಿ 100 ಹಾಗೂ ಪ್ರಶಸ್ತಿ

ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಮಿಥಿಕ್ ಸೊಸೈಟಿ ಇದೇ ಮೇ 3 ರಿಂದ 5 ನೇ ತಾರೀಖಿನವರೆಗೆ ಮೂರು ದಿನಗಳ ಸಮಾರೋಪ ಸಮಾರಂಭ ಆಚರಿಸುತ್ತಿದೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಜನ ಹಿರಿಯರನ್ನು ಹಾಗೂ 7 ಜನ ಯುವ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಿದೆ. ಯುವ ಸಾಧಕರ ಪಟ್ಟಿಯಲ್ಲಿ ನನ್ನ ಹೆಸರೂ ಇದೆ.

ಉಳಿದಂತೆ ಎಲ್ಲಾ ಪ್ರಶಸ್ತಿ ವಿಜೇತರ ಪಟ್ಟಿ ಹಾಗೂ ಕಾರ್ಯಕ್ರಮದ ವಿವರಣೆ ವಿಜಯ ಕರ್ನಾಟಕದಲ್ಲಿ ಪ್ರಕಟವಾಗಿದೆ. ಅದರ ಸುದ್ದಿ ತುಣುಕು ಇಲ್ಲಿದೆ.

ಗಮನಕ್ಕೆ: ದೊಡ್ಡ ಇಮೇಜ್ ಗೆ ಫೋಟೋ ಮೇಲೆ ಕ್ಲಿಕ್ ಮಾಡಿ.

Thursday, April 30, 2009

ಪೈಲೂರು ಶಿವರಾಮಯ್ಯನವರ ಬದುಕು-ಪ್ರವೃತ್ತಿಗಳ ಸಾಹಸ ಕಥನ

ಸತತವಾಗಿ ಏನಾದರೂ ಮಾಡುತ್ತಲೇ ಇರುವ ಶಿವರಾಂ ಪೈಲೂರು ಅವರು ಈಗ ತಮ್ಮ ಅಜ್ಜ ಪೈಲೂರು ಶಿವರಾಮಯ್ಯನವರ ಬಗ್ಗೆ ಪುಸ್ತಕ ಹೊರ ತರುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲಿದೆ. ಮಾಹಿತಿಗೆ ಶಿವರಾಂ ಪೈಲೂರು -94484-10077 ಇಲ್ಲಿಗೆ ಸಂಪರ್ಕಿಸಬಹುದು.