ಮೊನ್ನೆ ಬಿಡುಗಡೆಯಾದ ನನ್ನ ಹೊಸ ಪುಸ್ತಕ ಜಲಿಯನ್ ವಾಲಾ ಬಾಗ್ ಪುಸ್ತಕವನ್ನು ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಜಿಯವರಿಗೆ ತಲುಪಿಸಿ, ಅವರ ಆಶೀರ್ವಾದ ಪಡೆದು ಬಂದಿದ್ದೆ. ಈ ಹಿಂದೆ ನಾನು ಬರೆದ ಪುಸ್ತಕಗಳ್ನೂ ಸಹ ಶ್ರೀಗಳವರಿಗೆ ತಲುಪಿಸಿದ್ದೆ. ಆಗೆಲ್ಲಾ ಪುಸ್ತಕಗಳು ಚನ್ನಾಗಿವೆ ಎಂದು ಆಶೀರ್ವದಿಸಿದ್ದರು. ಚಂದ್ರಯಾನ ಪುಸ್ತಕದ ನೂರು ಪ್ರತಿಗಳನ್ನು ತರಿಸಿಕೊಂಡು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ತಿಗಳಿಗೆ ನೀಡಿದ್ದರು.
ಈಗ ಜಲಿಯನ್ ವಾಲಾ ಬಾಗ್ ಬಗ್ಗೆ ಗುರುಗಳು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕೇವಲ ನನಗೊಬ್ಬನಿಗೆ ಮಾತ್ರವಲ್ಲ, ವಿಜಯ ಕರ್ನಾಟಕ ಪತ್ರಿಕೆಯ ತಮ್ಮ ಬಿಸಿಲು ಬೆಳದಿಂಗಳು ಕಾಲಂನಲ್ಲಿ ಈ ಪುಸ್ತಕದ ಬಗ್ಗೆ ಬರೆಯುವ ಮೂಲಕ ಎಲ್ಲರಿಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರು ಬರೆಯುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಈಗ ಬರೆದು ಆಶೀರ್ವದಿಸಿದ್ದಾರೆ. ಗುರುಗಳಿಗೆ ನಮಸ್ಕಾರಗಳು.
ಬಿಸಿಲು ಬೆಳದಿಂಗಳು ಅಂಕಣದಲ್ಲಿ ಗುರುಗಳು ಬರೆದದ್ದು ಇಲ್ಲಿದೆ. ಓದಿ ನಿಮ್ಮ ಅನಿಸಿಕೆ ತಿಳಿಸಿ. ಇದನ್ನು ದೊಡ್ಡದಾಗಿ ನೋಡಲು ಲೇಖನದ ಮೇಲೆ ಕ್ಲಿಕ್ ಮಾಡಿ.
Tuesday, April 14, 2009
Subscribe to:
Post Comments (Atom)
No comments:
Post a Comment